ನನ್ನ ಪುಟಗಳು

26 ನವೆಂಬರ್ 2013

ಭಾರತೀಯತೆ (ಪದ್ಯ-2)

ಪ್ರಸ್ತುತ ಪದ್ಯಭಾಗವನ್ನು ಕೆ.ಎಸ್.ನರಸಿಂಹಸ್ವಾಮಿಯವರ ‘ನವಪಲ್ಲವ’ ಕವನ ಸಂಕಲನದಿಂದ ಆರಿಸಿಕೊಳ್ಳಲಾಗಿದೆ.
ಕೆ.ಎಸ್.ನರಸಿಂಹಸ್ವಾಮಿಯವರ ಪರಿಚಯ
ಕೆಎಸ್‌ನರಸಿಂಹಸ್ವಾಮಿಯವರ ಪೂರ್ಣಹೆಸರು: ‘ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ’,
ಇವರ ಕಾಲ: ಜನನ: ಜನವರಿ ೨೬, ೧೯೧೫            ನಿಧನ: ಡಿಸೆಂಬರ್ ೨೭, ೨೦೦೩
ಸ್ಥಳ: ಇವರು ಮಂಡ್ಯ ಜಿಲ್ಲೆಯ ಕೃ‌ಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿಯಲ್ಲಿ ಜನಿಸಿದರು. 
ವಿದ್ಯಾಭ್ಯಾಸ: ಮೈಸೂರಿನಲ್ಲಿ ಇಂಟರ್ ಮೀಡಿಯಟ್ ಹಾಗೂ ಬೆಂಗಳೂರಿನಲ್ಲಿ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ; (ಅಪೂರ್ಣ) ವ್ಯಾಸಂಗ ಮಾಡಿದರು. ೧೯೩೭ರಲ್ಲಿ ಸರಕಾರಿ ಸೇವೆಗೆ ಸೇರಿ ೧೯೭೦ರಲ್ಲಿ ನಿವೃತ್ತರಾದರು. 
      ಮೈಸೂರು ಮಲ್ಲಿಗೆಯ ಕವಿತೆಗಳನ್ನು ಭಾವಗೀತೆಗಳ ಮೂಲಕ ಹಾಡಿ ಜನಪ್ರಿಯ ಮಾಡಿದಂತೆ ಆ ಕೃತಿಯನ್ನು ಅಪಾರ ಸಂಖ್ಯೆಯ ಓದುಗರೂ ಕೊಂಡು ಓದಿರುವುದು ಹೆಗ್ಗಳಿಕೆ. ಕೆಲವು ವರ್ಷಗಳ ಹಿಂದೆ ಇದೇ ಹೆಸರಿನಿಂದ ಚಲನಚಿತ್ರವೂ ನಿರ್ಮಾಣವಾಗಿದೆ. ನಾನು ಬರೆದ ಕವಿತೆಗಳು ಪ್ರೇಮ ಕವಿತೆಗಳಲ್ಲ, ದಾಂಪತ್ಯ ಕವಿತೆಗಳೆಂದು ಕೆಎಸ್‌ನ ಹೇಳಿಕೊಂಡಿದ್ದಾರೆ. ಮೈಸೂರು ಮಲ್ಲಿಗೆಯಲ್ಲಿ ಬಹುತೇಕ ಕವಿತೆಗಳು ದಾಂಪತ್ಯ ಗೀತೆಗಳೇ ಆಗಿವೆ. ನವಿಲೂರು, ಹೊನ್ನೂರು ಮೊದಲಾದವು ಗ್ರಾಮ ಬದುಕಿನ ನೆಲೆಗಳು. ಮಣ್ಣಿನ ವಾಸನೆಯ ಅಪ್ಪಟ ಕವಿತೆಗಳನ್ನು ಕೆಎಸ್‌ನ ನೀಡಿದ್ದಾರೆ. ಐರಾವತ, ದೀಪದ ಮಲ್ಲಿ, ಉಂಗುರ, ಇರುವಂತಿಗೆ, ಶಿಲಾಲತೆ, ಮನೆಯಿಂದ ಮನೆಗೆ, ತೆರೆದ ಬಾಗಿಲು, ನವಪಲ್ಲವ ಮುಂತಾದ ಕವನಗಳು ಹೊರಬಂದಿವೆ. "ಮಲ್ಲಿಗೆಯ ಮಾಲೆ" ಸಮಗ್ರ ಕವಿತೆಯ ಸಂಕಲನ. ಸಮಗ್ರ ಸಂಕಲನ ಬಂದರೂ ಈಚೆಗೆ `ಸಂಜೆ ಹಾಡು' ಎಂಬ ಹೊಸ ಕಾವ್ಯ ಹೊರಬಂದಿದೆ.
        ಕಾವ್ಯ ಇವರ ಪ್ರಮುಖ ಕೃಷಿ ಆದರೂ ಗದ್ಯದಲ್ಲೂ ಕೃಷಿ ಮಾಡಿದ್ದಾರೆ. ಮಾರಿಯಕಲ್ಲು, ಉಪವನ, ದಮಯಂತಿ ಪ್ರಮುಖ ಕೃತಿಗಳು. 
ಅನುವಾದಿತ ಕೃತಿಗಳು: ಮೋಹನ ಮಾಲೆ, ನನ್ನ ಕನಸಿನ ಭಾರತ, ಪ್ರಪಂಚದ ಬಾಲ್ಯದಲ್ಲಿ, ಮೀಡಿಯಾ, ಸುಬ್ರಮಣ್ಯ ಭಾರತಿ, ಮಾಯಾಶಂಖ ಮತ್ತು ಇತರ ಕತೆಗಳು 
ಸಾಹಿತ್ಯ ಜೀವನ ಮತ್ತು ಪ್ರಶಸ್ತಿಗಳು
೧೯೩೩ - ಕಬ್ಬಿಗನ ಕೂಗು ಮೊದಲ ಕವನ.
೧೯೪೨- ಮೈಸೂರು ಮಲ್ಲಿಗೆ ಪ್ರಸಿದ್ಧ ಕವನ ಸಂಕಲನ ಪ್ರಕಟ.
೧೯೪೩- ದೇವರಾಜ್ ಬಹದ್ದೂರ್ ಬಹುಮಾನ.
೧೯೫೭ರಲ್ಲಿ `ಶಿಲಾಲತೆ'ಗೆ ರಾಜ್ಯ ಸಂಸ್ಕೃತಿ ಇಲಾಖೆ ಪ್ರಶಸ್ತಿ,
೧೯೭೨- ಚಂದನ ಅಭಿನಂದನ ಗ್ರಂಥ ಸಮರ್ಪಣೆ
೧೯೭೭- ತೆರೆದ ಬಾಗಿಲು ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ .
೧೯೮೬- ಮೈಸೂರು ಮಲ್ಲಿಗೆ ಧ್ವನಿ ಸುರುಳಿ.
೧೯೮೭- ಕೇರಳದ ಕವಿ ಕುಮಾರ್ ಆಶಾನ್ ಪ್ರಶಸ್ತಿ .
೧೯೯೦- ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯಾ ಸಮ್ಮೇಳನದ ಅಧ್ಯಕ್ಷತೆ.
೧೯೯೧- ಮೈಸೂರು ಮಲ್ಲಿಗೆ ಚಲನಚಿತ್ರ ಬಿಡುಗಡೆ.
೧೯೯೨- ಉತ್ತಮ ಗೀತರಚನೆಗೆ ರಾಷ್ಟ್ರಪತಿ ಪ್ರಶಸ್ತಿ .
೧೯೯೨- ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಿಲಿಟ್.
೧೯೯೬- ಮಾಸ್ತಿ ಪ್ರಶಸ್ತಿ .
೧೯೯೭- ಪಂಪ ಪ್ರಶಸ್ತಿ .
೧೯೯೯- ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಫೆಲೋಷಿಪ್.
೨೦೦೦- ಗೊರೂರು ಪ್ರಶಸ್ತಿ .
ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಪ್ರಮುಖ ಕೃತಿಗಳು
ಕವನ ಸಂಕಲನಗಳು
೧೯೪೫- ಐರಾವತ
೧೯೪೭- ದೀಪದ ಮಲ್ಲಿ
೧೯೪೯- ಉಂಗುರ
೧೯೫೪- ಇರುವಂತಿಗೆ
೧೯೫೮- ಶಿಲಾಲತೆ
೧೯೬೦- ಮನೆಯಿಂದ ಮನೆಗೆ
೧೯೭೯- ತೆರೆದ ಬಾಗಿಲು
೧೯೮೯- ನವ ಪಲ್ಲವ
೧೯೯೩- ದುಂಡುಮಲ್ಲಿಗೆ
೧೯೯೯- ನವಿಲದನಿ
೨೦೦೦- ಸಂಜೆ ಹಾಡು
೨೦೦೧- ಕೈಮರದ ನೆಳಲಲ್ಲಿ
೨೦೦೨- ಎದೆ ತುಂಬ ನಕ್ಷತ್ರ
೨೦೦೩- ಮೌನದಲಿ ಮಾತ ಹುಡುಕುತ್ತ
೨೦೦೩- ದೀಪ ಸಾಲಿನ ನಡುವೆ
೨೦೦೩- ಮಲ್ಲಿಗೆಯ ಮಾಲೆ
೨೦೦೩- ಹಾಡು-ಹಸೆ

ಗದ್ಯ
ಮಾರಿಯ ಕಲ್ಲು
ದಮಯಂತಿ
ಉಪವನ
ಅನುವಾದ
ಮೋಹನಮಾಲೆ
ನನ್ನ ಕನಸಿನ ಭಾರತ
ಸುಬ್ರಹ್ಮಣ್ಯ ಭಾ
ರತಿ
ಪುಷ್ಕಿನ್ ಕವಿತೆಗಳು
ರಾಬರ್ಟ್ ಬರ್ನ್ಸ್ ಪ್ರೇಮಗೀತೆಗಳು

ಶ್ರೀಯುತರ ಕವನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




***************

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ